ಸ್ವಾತಂತ್ರ್ಯ ಹೋರಾಟ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ ದಿ. ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ನೀಡಿ ಕೇಂದ್ರ ಸರ್ಕಾರ ಗೌರವಿಸಿದೆ.
ಜನನಾಯಕ ಎಂದೇ ಖ್ಯಾತಿ ಪಡೆದಿದ್ದ ಕರ್ಪೂರಿ ಠಾಕೂರ್ ಅತ್ಯಂತ ಸರಳ ಜೀವಿಯಾಗಿದ್ದರು. ಠಾಕೂರ್ ಅವರು ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದರೂ ಅವರ ಬಳಿ ಒಂದು ಸ್ವಂತ ಕಾರು ಸಹ ಇರಲಿಲ್ಲ. ಕಾರು ಬಿಡಿ, ಸ್ವಂತ ಮನೆ ಸಹ ಕಟ್ಟಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ.
ಕರ್ಪೂರಿ ಠಾಕೂರ್ ಅವರು ಒಬ್ಬ ಶಿಕ್ಷಕ, ಸ್ವಾತಂತ್ರ್ಯ ಹಾಗೂ ಸಮಾಜವಾದಿ ಹೋರಾಟಗಾರ, ರಾಜಕಾರಣಿ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಜನನಾಯಕರಾಗಿದ್ದರು. ನಾಳೆ ಅವರ ಜನ್ಮ ಶತಮಾನೋತ್ಸವದ ದಿನದಂದು ಕೇಂದ್ರ ಸರ್ಕಾರ ಕರ್ಪೂರಿ ಠಾಕೂರ್ಗೆ ಭಾರತ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಅವರ ಸರಳತೆಗೆ ಕೆಲವು ಉದಾಹರಣೆ ಇಲ್ಲಿವೆ...
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ; 26 ತಿಂಗಳು ಜೈಲುವಾಸ
ಕರ್ಪೂರಿ ಠಾಕೂರ್ ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ತೊಡಗಿಸಿಕೊಂಡ ಸ್ವಾತಂತ್ರ್ಯ ಹೋರಾಟಗಾರ. ಸ್ವಾತಂತ್ರ್ಯ ಹೋರಾಟದಲ್ಲಿ ಧುಮಿಕಿದ ಕರ್ಪೂರಿ ಠಾಕೂರ್ 26 ತಿಂಗಳು ಜೈಲು ವಾಸ ಸಹ ಅನುಭವಿಸಿದ್ದರು.
ಇನ್ನು ಠಾಕೂರ್ ಅವರು ಮೊದಲ ಬಾರಿಗೆ 1970 ರಿಂದ 1971 ರ ವರೆಗೆ ಮತ್ತು ಎರಡನೇ ಬಾರಿಗೆ 1977ರಿಂದ 1979ರ ವರೆಗೆ ಬಿಹಾರದ ಮುಖ್ಯಮಂತ್ರಿಯಾಗಿದ್ದರು. 1988ರಲ್ಲಿ ತಮ್ಮ 64 ವಯಸ್ಸಿನಲ್ಲಿ ನಿಧನರಾದರು.
Advertisement