21ರಿಂದ ವಾಜಪೇಯಿ ಕಪ್

ಒಟ್ಟು 6 ರಾಜ್ಯ ತಂಡಗಳು ಭಾಗವಹಿಸಲಿವೆ...
13ನೇ ವಾಜಪೇಯಿ ಕಪ್ ರಾಷ್ಟ್ರೀಯ ವಾಲಿಬಾಲ್ ಟೂರ್ನಿ
13ನೇ ವಾಜಪೇಯಿ ಕಪ್ ರಾಷ್ಟ್ರೀಯ ವಾಲಿಬಾಲ್ ಟೂರ್ನಿ
Updated on

ಬೆಂಗಳೂರು: ಕರ್ನಾಟಕ ರಾಜ್ಯ ವಾಲಿಬಾಲ್ ಸಂಸ್ಥೆ ಹಾಗೂ ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ವತಿಯಿಂದ ಆಯೋಜಿಸಲಾಗುವ 13ನೇ ವಾಜಪೇಯಿ ಕಪ್ ರಾಷ್ಟ್ರೀಯ ವಾಲಿಬಾಲ್ ಟೂರ್ನಿ ಡಿಸೆಂಬರ್ 21ರಿಂದ 25ರವರೆಗೆ ನಡೆಯಲಿದೆ.
ರಾಜಾಜಿನಗರ ವಿವೇಕಾನಂದ ಮೈದಾನದಲ್ಲಿ ಐದು ದಿನಗಳ ಕಾಲ ಈ ಪಂದ್ಯಾವಳಿ ನಡೆಯಲಿದ್ದು, ಒಟ್ಟು 6 ರಾಜ್ಯ ತಂಡಗಳು ಭಾಗವಹಿಸಲಿವೆ ಎಂದು ರಾಜ್ಯ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಬಚ್ಚೇಗೌಡ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು, ಮಹಾರಾಷ್ಟ್ರ ಮತ್ತು ಸರ್ವಿಸಸ್ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ಈ ಬಾರಿ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ವಿಜೇತರಿಗೆ ತಲಾ ರೂ.2.5 ಲಕ್ಷ ಬಹುಮಾನ ಮೊತ್ತ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಅಧ್ಯಕ್ಷ ಹಾಗೂ ಮಹಾನಗರ ಪಾಲಿಕೆಯ ಮಾಜಿ ಉಪ ಮಹಾಪೌರ ಎಸ್.ಹರೀಶ್, ಈ ಬಾರಿಯ ಪಂದ್ಯಾವಳಿಯಲ್ಲಿ ಕೇವಲ ಕ್ರೀಡೆಗೆ ಮಾತ್ರವಲ್ಲದೆ ಸಾಂಸ್ಕೃತಿಕ ಕಲೆಗೂ ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ ಒಂದೊಂದು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಈ ಬಾರಿಯ ಪಂದ್ಯಾವಳಿ, ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಶಿಪ್ಗೆ ತಯಾರಿ ನಡೆಸಲು ಉತ್ತಮ ವೇದಿಕೆಯಾಗಲಿದೆ. ಹಾಗಾಗಿ ಈ ಪಂದ್ಯಾವಳಿ ಹೆಚ್ಚು ಆಸಕ್ತಿ ಮೂಡಿಸಿದೆ. ಪಂದ್ಯಾವಳಿ ವೀಕ್ಷಿಸಲು 5 ಸಾವಿರ ಸಾಮರ್ಥ್ಯದ ಪ್ರೇಕ್ಷಕರ ಗ್ಯಾಲರಿಯನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com