ಬೆಂಗಳೂರು: ವಿಜಯ ಹಜಾರೆ ಏಕದಿನ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಕರ್ನಾಟಕ ಕೇರಳ ವಿರುದ್ಧ 9 ವಿಕೆಟ್ ಗಳ ಸುಲಭ ಜಯ ದಾಖಲಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಲ್ರೌಂಡರ್ ಶ್ರೇಯಸ್ ಗೋಪಾಲ್(19ಕ್ಕೆ 5) ಮಾರಕ ದಾಳಿ ನೆರವಿನಿಂದ ಹಾಲಿ ಚಾಂಪಿಯನ್ಸ್ ಕರ್ನಾಟಕ ತಂಡ ಕೇರಳ ತಂಡವನ್ನು 49 ರನ್ ಗಳಿಗೆ ಆಲೌಟ್ ಆಯಿತು.
ಸುಲಭ ಗುರಿಯನ್ನು ಬೆನ್ನಟ್ಟಿದ್ ಕರ್ನಾಟಕ 5.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರಿಂದ ಟೂರ್ನಿಯಲ್ಲಿ 3ನೇ ಜಯ ದಾಖಲಿಸಿದ ಕರ್ನಾಟಕ ನಾಕೌಟ್ ಹಂತದ ಆಸೆಯನ್ನು ಜೀವಂತವಾಗಿರಿಸಿಕೊಂಡಿತು.