ದೆಹಲಿಗೆ ಗುಜರಾತ್ ಸವಾಲು

ಸೆಮಿಫೈನಲ್‍ನಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪ್ರಚಂಡ ಗೆಲವಿನಿಂದಾಗಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಗಂಭೀರ್ ನೇತೃತ್ವದ ದೆಹಲಿ ಪಡೆ, ಸೋಮವಾರ...
ಗೌತಮ್ ಗಂಭೀರ್
ಗೌತಮ್ ಗಂಭೀರ್
Updated on

ಬೆಂಗಳೂರು: ಸೆಮಿಫೈನಲ್‍ನಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪ್ರಚಂಡ ಗೆಲವಿನಿಂದಾಗಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಗಂಭೀರ್ ನೇತೃತ್ವದ ದೆಹಲಿ ಪಡೆ, ಸೋಮವಾರ ನಡೆಯಲಿರುವ ವಿಜಯ್ ಹಜಾರೆ ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಎದುರಿಸಲಿದ್ದು, 2ನೇ ಬಾರಿಗೆ ಈ ಪ್ರಶಸ್ತಿ ಗೆಲ್ಲುವತ್ತ ದಾಪುಗಾಲಿಟ್ಟಿದೆ. 2012-13ರ ಸಾಲಿನ ಟ್ರೋಫಿಗೆ ದೆಹಲಿ ತಂಡ ಭಾಜನವಾಗಿತ್ತು. ಟೂರ್ನಿಯುದ್ದಕ್ಕೂ ಮಿಂಚಿರುವ ಆಲ್ರೌಂಡರ್ ಅಕ್ಷರ್ ಪಟೇಲ್ ಗುಜರಾತ್ ತಂಡದ ಪ್ರಮುಖ ಆಧಾರಸ್ತಂಭವಾಗಿದ್ದರೆ, ದೆಹಲಿ ಪಾಲಿಗೆ ಸ್ಫೋಟಕ ಆರಂಭಿಕ ಬ್ಯಾಟ್ಸ್‍ಮನ್ ಶಿಖರ್ ಧವನ್ ಆಸರೆಯಾಗಿದ್ದಾರೆ.

ಪಂದ್ಯ ಆರಂಭ: ಮಧ್ಯಾಹ್ನ 2:30ಕ್ಕೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com