ಬೆಂಗಳೂರು: ಕರ್ನಾಟಕ ವಿರುದ್ಧದ ರಣಜಿ ಸೆಮಿಫೈನಲ್ ಪಂದ್ಯದ ವೇಳೆ ಮುಂಬಯಿ ತಂಡದ ಆಲ್ರೌಂಡರ್ ಅಭಿಷೇಕ್ ನಾಯರ್ ಅವರ ತಲೆಗೆ ಚೆಂಡಿನಿಂದ ಪೆಟ್ಟು ಬಿದ್ದು ಕೆಲ ಕಾಲ ಪ್ರಜ್ಞಾಹೀನರಾಗಿದ್ದರು ಎಂದು ತಿಳಿದು ಬಂದಿದೆ.
ತಕ್ಷಣ ಅವರನ್ನು ಸ್ಥಳಿಯ ಹಾಸ್ಮಾಟ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಗಾಯದಿಂದ ಬಳಲುತ್ತಿರುವ ಅಭಿಷೇಕ್ ಅವರು ಪ್ರಾಣಾಪಾಯದಿಂದ ಪರಾಗಿದ್ದು, ಆದರೂ, ಇಡೀ ದಿನ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗುತ್ತದೆ ಎಂದು ಮುಂಬಯಿ ಕ್ರಿಕೆಟ್ ಸಂಸ್ಥೆಯ ಜಂಟಿ ಕಾರ್ಯದರ್ಶಿನಿತಿನ್ ದಲಾಲ್ ಹೇಳಿದ್ದಾರೆ.
Advertisement