ಏಕದಿನ ಸರಣಿಗೆ ಟೀಂ ಇಂಡಿಯಾ ಸಜ್ಜು

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರು ಸಿದ್ದತೆ ನಡೆಸಿದ್ದಾರೆ...
ಭಾರತ ಕ್ರಿಕೆಟ್ ತಂಡ
ಭಾರತ ಕ್ರಿಕೆಟ್ ತಂಡ

ಡಾಕಾ: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರು ಸಿದ್ದತೆ ನಡೆಸಿದ್ದಾರೆ, ಭಾರತ ಏಕದಿನ ತಂಡದಲ್ಲಿನ ಎಂಟು ಆಟಗಾರರು ಸುದೀರ್ಘ ವಿರಾಮದ ನಂತರ ಈಗ ಏಕದಿನ ಸರಣಿಗೆ ಸಜ್ಜಾಗಿದ್ದಾರೆ, ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಜತೆಗೆ ಸ್ಟುವರ್ಟ್ ಬಿನ್ನಿ, ರವೀಂದ್ರ ಜಡೇಜಾ, ಅಕ್ಷರಾ ಪಟೇಲ್, ಸುರೇಶ್ ರೈನಾ, ಮೋಹಿತ್ ಶರ್ಮಾ, ಧವಳ್ ಕುಲಕರ್ಣಿ  ಮತ್ತು ಅಂಬಟಿ ರಾಯುಡು, ಸೋಮವಾರ ಬಾಂಗ್ಲಾಗೆ ಆಗಮಿಸಿದರು. ಮಂಗಳವಾರ ಮೀರ್ ಪುರದ ಶೇರ್  ಎ ಬಾಂಗ್ಲಾ  ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸಿದರು,

ಮಳೆಯಿಂದ ಅಡಚಣೆಗೊಳಗಾದ ಟೆಸ್ಟ್ ಪಂದ್ಯದಲ್ಲಿ ಅತಿಥೇಯರ ವಿರುದ್ಧ ಪ್ರಾಬಲ್ಯ ಮೆರೆದಿದ್ದ ಭಾರತ ತಂಡ ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಿದೆ. ಕೆಲ ಆಟಗಾರರು ಏಕದಿನ ತಂಡದಲ್ಲಿ ಮುಂದುವರಿಯಲಿದ್ದು, ಉಳಿದ ಆಟಗಾರರು ತವರಿಗೆ ಮರಳಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ತಂಡದ ತಂಡದ ಮ್ಯಾನೇಜರ್ ವಿಶ್ವರೂಪ್ ಡೇ, ತವರಿಗೆ ಮರಳಿದ ಆಟಗಾರರಿಗೆ ಬೀಳ್ಕೊಡುಗೆ ನೀಡಲು ನಿರ್ಧರಿಸಲಾಗಿತ್ತು ಎಂದರು,
ಜೂನ್ 18 ರಂದು ಮೊದಲ ಏಕದಿನ ಪಂದ್ಯ ಆರಂಭವಾಗಲಿದ್ದು, ನಂತರ 21 ಹಾಗೂ 24 ರಂದು ಕ್ರಮವಾಗಿ 2ನೇ ಹಾಗೂ ಮೂರನೇ ಪಂದ್ಯಗಳು ನಡೆಯಲಿವೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com