ಮುಂಬೈ: ತೀವ್ರ ಒತ್ತಡದಲ್ಲಿದ್ದಾಗಲೇ ತಮ್ಮಿಂದ ಉತ್ತಮ ಪ್ರದರ್ಶನ ಹೊರಹೊಮ್ಮುತ್ತದೆ ಎಂದು ಮುಂಬೈ ಇಂಡಿಯನ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಆಂಬಟಿ ರಾಯುಡು ತಿಳಿಸಿದ್ದಾರೆ.
ಮಂಗಳವಾರ ನಡೆದ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ವಿರುದ್ಧದ ಪಂದ್ಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಂದ್ಯದ ನಂತರ ಮಾತನಾಡಿದ ಅವರು, ತಮ್ಮ ಪ್ರದರ್ಶನದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಕ್ರೀಸ್ ನಲ್ಲಿದ್ದಾಗ ನಾನು ಹೆಚ್ಚು ಭಾವೋದ್ವೇಗಕ್ಕೆ ಒಳಗಾಗುವುದಿಲ್ಲ. ನನ್ನ ಗುರಿಯೇನು, ಹೇಗೆ ಇನಿಂಗ್ಸ್ ಮುಂದುವರಿಸಿಕೊಂಡು ಹೋಗಬೇಕು ಎಂಬ ಲೆಕ್ಕಾಚಾರದ ಬಗ್ಗೆ ಮಾತ್ರ ಗಮನ ಹರಿಸುತ್ತೇನೆ ಎಂದು ಅವರು ಹೇಳಿದರು.
Advertisement