ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಟೀಂ ಇಂಡಿಯಾ ನಡುವಿನ ಟೆಸ್ಟ್ ಪಂದ್ಯಕ್ಕೆ ವರುಣ ಅಡ್ಡಿ ಮಾಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತದಿಂದಾಗಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಕಳೆದ 1 ವಾರದಿಂದ ಮೋಡ ಕವಿದ ವಾತಾವರಣವಿದೆ. ನಿನ್ನೆಯಿಂದ ಆರಂಭವಾದ ಎರಡನೇ ಟೆಸ್ಟ್ ನ ಎರಡನೇ ದಿನವಾದ ಇಂದು ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ.
ಭಾರತ ಸ್ಪಿನ್ ದಾಳಿಗೆ ತತ್ತರಿಸಿದ್ದ ದಕ್ಷಿಣ ಆಫ್ರಿಕಾ 214 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ಮೊದಲ ದಿನಾಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 80 ರನ್ ಪೇರಿಸಿ ದಿನದ ಗೌರವ ಮೊತ್ತವನ್ನು ದಾಖಲಿಸಿತ್ತು.
ಇಂದು ನಡೆಯಬೇಕಿದ್ದ ಎರಡನೇ ದಿನದಾಟ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದ್ದು, ಅಭಿಮಾನಿಗಳು ಮಳೆ ನಿಲ್ಲುವುದನ್ನು ಕಾಯತೊಡಗಿದ್ದಾರೆ.
Advertisement