ಸದ್ಯದ ಸ್ಥಿತಿಯಲ್ಲಿ ಭಾರತದೊಂದಿಗೆ ಕ್ರಿಕೆಟ್ ಸರಣಿ ಸಾಧ್ಯವಿಲ್ಲ: ಪಾಕ್ ಭದ್ರತಾ ಸಲಹೆಗಾರ

ಭಾರತದೊಂದಿಗೆ ಕ್ರಿಕೆಟ್ ಸರಣಿ ನಡೆಯುವುದು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ಸರ್ತಾಜ್ ಅಜೀಜ್
ಸರ್ತಾಜ್ ಅಜೀಜ್
Updated on

ಇಸ್ಲಾಮಾಬಾದ್: ಭಾರತದೊಂದಿಗೆ ಕ್ರಿಕೆಟ್ ಸರಣಿ ನಡೆಯುವುದು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ಇಸ್ಲಾಮಾಬಾದ್ ನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸರ್ತಾಜ್ ಅಜೀಜ್, ಸೌಹಾರ್ದ ಪರಿಸರದಲ್ಲಿ ಮಾತ್ರ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿ ನಡೆಯಲು ಸಾಧ್ಯ, ಸದ್ಯಕ್ಕೆ ಉಭಯ ರಾಷ್ಟ್ರಗಳ ನಡುವೆ ಸೌಹಾರ್ದಯುತ ಸಂಬಂಧವಿಲ್ಲ. ಆದ್ದರಿಂದ ಕ್ರಿಕೆಟ್ ಸರಣಿ ನಡೆಯಲು ಸಾಧ್ಯವಿಲ್ಲ ಎಂದು ಹೇಳಿರುವುದನ್ನು ರೇಡಿಯೋ ಪಾಕಿಸ್ತಾನ್ ವರದಿ ಮಾಡಿದೆ. 
ಡಿಸೆಂಬರ್- ಜನವರಿಯಲ್ಲಿ ಭಾರತ- ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ನಿಗದಿಯಾಗಿತ್ತು, ಇದಕ್ಕೂ ಮುನ್ನ ಸರ್ತಾಜ್ ಅಜೀಜ್ ಕ್ರಿಕೆಟ್ ಸರಣಿ ನಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com