ಮೊದಲು ಸ್ವಲ್ಪ ಜನ ಆಕ್ರೋಶಭರಿತರಾಗಿ ನಮ್ಮತ್ತ ಬಾಟಲಿ ಎಸೆದಿದ್ದರು. ಆಮೇಲೆ ಅದೆಲ್ಲಾ ತಮಾಷೆಗಾಗಿ ಆಗಿತ್ತು. ಇದನ್ನೆಲ್ಲಾ ತುಂಬಾ ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ಈ ಹಿಂದೆ ವಿಶಾಖಪಟ್ಟಣದಲ್ಲಿ ನಡೆದ ಪಂದ್ಯವೊಂದರಲ್ಲಿ ಭಾರತ ಗೆದ್ದಾಗಲೂ ಪ್ರೇಕ್ಷರು ಬಾಟಲಿ ಎಸೆದಿದ್ದದ್ದು ನನಗೆ ನೆನಪಿದೆ. ಮೊದಲು ಒಂದು ಬಾಟಲಿ, ಆಮೇಲೆ ಅದರ ಹಿಂದೆ ಬಾಟಲಿಗಳನ್ನು ಎಸೆಯುತ್ತಾ ಹೋದರು. ಅದೆಲ್ಲಾ ತಮಾಷೆಗಾಗಿ ಮಾಡಿದ್ದು ಎಂದು ಧೋನಿ ಹೇಳಿದ್ದಾರೆ.