ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಆರೋಪ ಮುಕ್ತರಾಗಿ ಹೊರ ಬಂದಿರುವ ರಾಜಸ್ಥಾನ ರಾಯಲ್ಸ್ ತಂಡದ ಎಸ್.ಶ್ರೀಶಾಂತ್, ಅಜಿತ್ ಚಾಂಡಿಲಾ ಹಾಗೂ ಅಂಕಿತ್ ಚೌಹಾಣ್ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ತಮ್ಮ ಪರಿಷ್ಕೃತ ಮೇಲ್ಮನವಿಯಲ್ಲಿ 38 ಅಂಶಗಳ ಪಟ್ಟಿಯನ್ನು ಸಿದ್ಧ ಪಡಿಸಿದೆ. ವಿಚಾರಣಾ ನ್ಯಾಯಾಲಯವು ತನ್ನ ತೀರ್ಪಿನ ವೇಳೆ ಎಂಸಿಒಸಿಎ ಕಾಯ್ದೆಯನ್ನು ತಪ್ಪಾಗಿ ಗ್ರಹಿಸಿದೆ. ಹಾಗಾಗಿ ತೀರ್ಪು ನಿರ್ಧಿಷ್ಟವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Advertisement