ರಜತ ಪದಕ ಪಡೆದ ರಾಜ್ಯದ ಅಕ್ಷತಾ

ಪೂರ್ವ ಗೋದಾವರಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆ ಜಂಟಿಯಾಗಿ ಆಯೋಜಿಸಿರುವ 27ನೇ ದಕ್ಷಿಣ ವಲಯ ಕಿರಿಯರ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದ ಮೊದಲ ದಿನವಾದ ಗುರುವಾರ ರಾಜ್ಯಕ್ಕೆ ಒಂದು ಬೆಳ್ಳಿ ಪದಕ ಲಭ್ಯವಾಗಿದೆ...
ಓಟದ ಸ್ಪರ್ಧೆ (ಸಾಂದರ್ಭಿಕ ಚಿತ್ರ)
ಓಟದ ಸ್ಪರ್ಧೆ (ಸಾಂದರ್ಭಿಕ ಚಿತ್ರ)

ಕಾಕಿನಾಡ: ಪೂರ್ವ ಗೋದಾವರಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆ ಜಂಟಿಯಾಗಿ ಆಯೋಜಿಸಿರುವ 27ನೇ ದಕ್ಷಿಣ ವಲಯ ಕಿರಿಯರ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದ ಮೊದಲ  ದಿನವಾದ ಗುರುವಾರ ರಾಜ್ಯಕ್ಕೆ ಒಂದು ಬೆಳ್ಳಿ ಪದಕ ಲಭ್ಯವಾಗಿದೆ.

5 ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ ಅಕ್ಷತಾ ನಿಗದಿತ ದೂರವನ್ನು 19: 52.6 ಸೆಕೆಂಡ್‍ಗಳಲ್ಲಿ ಮುಟ್ಟಿ ಬೆಳ್ಳಿ ಪದಕ ಗೆದ್ದುಕೊಂಡರು. ಇದೇ ವಿಭಾಗದಲ್ಲಿ ಸ್ಪರ್ಧಿಸಿದ್ದ ತಮಿಳುನಾಡಿನ  ಜ್ಯೋತಿ ಆರ್. (18:50.6 ಸೆ.) ಹಾಗೂ ಕೇರಳದ ವರ್ಷಾ ಎಂ.ವಿ. (20: 52.6 ಸೆ.) ಕ್ರಮವಾಗಿ ಚಿನ್ನ ಹಾಗೂ ಕಂಚಿನ ಗೌರವ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com