ಮಲೇಶ್ಯದಲ್ಲಿ ನಡೆದ ಕೂಟದ ಫೈನಲ್ ಪಂದ್ಯದಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 3-2 ಗೋಲುಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ನಂತರ ವಿಜೇತ ತಂಡ ಭಾರತಕ್ಕೆ ಮರಳಿದ್ದು ಈ ವೇಳೆ ನಾಯಕ ಶ್ರೀಜೇಶ್ ಮಾಧ್ಯಮದವರೊಂದಿಗೆ ಮಾತನಾಡುತ್ತಾ ದೇಶಕ್ಕಾಗಿ ಪ್ರಾಣ ತೆತ್ತವರಿಗೆ ಈ ಟ್ರೋಫಿಯನ್ನು ಅರ್ಪಿಸುವುದಾಗಿ ಹೇಳಿದರು.