ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡ ವಿರಾಟ್ ಕೊಹ್ಲಿಗೆ ಪ್ರಧಾನಿಯಿಂದ ಅಭಿನಂದನೆ

ಸ್ವಚ್ಛ ಭಾರತ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕರಿಸಿದ್ದಕ್ಕಾಗಿ ಭಾರತೀಯ ಟೆಸ್ಟ್...
ಕೋಲ್ಕತ್ತಾ ಈಡನ್ ಗಾರ್ಡನ್ ನಲ್ಲಿ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್
ಕೋಲ್ಕತ್ತಾ ಈಡನ್ ಗಾರ್ಡನ್ ನಲ್ಲಿ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್
ನವದೆಹಲಿ: ಸ್ವಚ್ಛ ಭಾರತ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕರಿಸಿದ್ದಕ್ಕಾಗಿ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಹೇಳಿದ್ದಾರೆ.
ಟ್ವಿಟ್ಟರ್ ನಲ್ಲಿ ಅವರು, ವಿರಾಟ್ ಕೊಹ್ಲಿಯವರು ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸಿದ್ದನ್ನು ನೋಡಿದ್ದೇನೆ. ಇದು ಸಣ್ಣದಾದರೂ ಕೂಡ ಪ್ರಬಲವಾದ ಸೂಚನೆಯಾಗಿದ್ದು ಪ್ರತಿಯೊಬ್ಬರಲ್ಲೂ ಸ್ಪೂರ್ತಿ ತುಂಬಬಲ್ಲದು ಎಂದು ಹೇಳಿದ್ದಾರೆ.
ಭಾರತ-ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಸಂದರ್ಭದಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅವರೊಂದಿಗೆ ಕೊಹ್ಲಿ ಮತ್ತು ಭಾರತೀಯ ತಂಡ ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸಿತ್ತು.
ಪ್ರಧಾನಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಕೊಹ್ಲಿ, ನಾವೆಲ್ಲರೂ ದೇಶದ ಸುಧಾರಣೆಯಲ್ಲಿ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇವೆ. ಅದಕ್ಕೆ ನಿಮ್ಮ ಪ್ರೇರಣೆಯೇ ಕಾರಣ ಎಂದು ಹೇಳಿದ್ದಾರೆ.
ಈಡನ್ ಗಾರ್ಡನ್ ಟೆಸ್ಟ್ ಪಂದ್ಯವನ್ನು ಭಾರತ 178 ರನ್ ಗಳಿಂದ ಗೆದ್ದು 2-0 ಅಂತರದಲ್ಲಿ ಮುಂದಿದೆ. ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಗಳಿಸಿದೆ. ಮೂರನೇ ಮತ್ತು ಅಂತಿಮ ಪಂದ್ಯ ಇಂದೋರ್ ನಲ್ಲಿ ಇಂದು ಆರಂಭವಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com