ಉರಿ ಉಗ್ರ ದಾಳಿ: ತನಗಾಗಿರುವ ನೋವಿನ ಭಾವನೆಯನ್ನು ವ್ಯಕ್ತಪಡಿಸಲಾಗುತ್ತಿಲ್ಲ; ವಿರಾಟ್ ಕೊಹ್ಲಿ

ಕಾಶ್ಮೀರದ ಉರಿ ಸೇನಾ ನೇಲೆ ಮೇಲೆ ಉಗ್ರರ ದಾಳಿಯನ್ನು ಟೀಂ ಇಂಡಿಯಾದ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತೀವ್ರವಾಗಿ ಖಂಡಿಸಿದ್ದಾರೆ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಕಾನ್ಪುರ: ಕಾಶ್ಮೀರದ ಉರಿ ಸೇನಾ ನೇಲೆ ಮೇಲೆ ಉಗ್ರರ ದಾಳಿಯನ್ನು ಟೀಂ ಇಂಡಿಯಾದ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತೀವ್ರವಾಗಿ ಖಂಡಿಸಿದ್ದಾರೆ.

ಯೋಧರ ಮೇಲಿನ ದಾಳಿಯಿಂದ ತನಗಾಗಿರುವ ನೋವನ್ನು ಭಾವನೆಗಳಿಂದ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದರ ಜತೆಗೆ ಗ್ರೈನೇಡ್ ದಾಳಿಗೆ ತುತ್ತಾಗಿ ಹಾನಿಗೀಡಾದ ಕಾಶ್ಮೀರದ ಉರಿಯ ಫೋಟೋವೊಂದನ್ನು ಕೂಡ ಅಪ್ ಲೋಡ್ ಮಾಡಿದ್ದಾರೆ.

ಭಾನುವಾರ ಬೆಳಗ್ಗೆ ಉಗ್ರರು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿನ ಸೇನಾ ನೆಲೆ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದರು. ಇದರಲ್ಲಿ 17 ಯೋಧರು ಹುತಾತ್ಮರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com