ಸಿಂಗಾಪುರ ಓಪನ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತ ಶಟ್ಲರ್ ಶ್ರೀಕಾಂತ್!

ಮಲೇಷ್ಯಾದ ಸಿಂಗಾಪುರದಲ್ಲಿ ನಡೆಯುತ್ತಿರುವ ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಕಿಡಾಂಬಿ ಶ್ರೀಕಾಂತ್ ಶುಕ್ರವಾರ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸಿಂಗಾಪುರ: ಮಲೇಷ್ಯಾದ ಸಿಂಗಾಪುರದಲ್ಲಿ ನಡೆಯುತ್ತಿರುವ ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಕಿಡಾಂಬಿ ಶ್ರೀಕಾಂತ್ ಶುಕ್ರವಾರ ಕ್ವಾರ್ಟರ್ ಫೈನಲ್  ಪ್ರವೇಶಿಸಿದ್ದಾರೆ.

ಇಂಡೋನೇಷ್ಯಾದ ಇಹ್ಸನ ಮೌಲಾನಾ ಮುಸ್ತೋಫಾ ವಿರುದ್ಧ ನಡೆದ ಪಂದ್ಯದಲ್ಲಿ ಕಿಡಾಂಬಿ ಶ್ರೀಕಾಂತ್ 18-21, 21-19, 22-20 ನೇರ ಸೆಟ್ ಗಳ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಶ್ರೀಕಾಂತ್ ಟೂರ್ನಿಯ ಕ್ವಾರ್ಟರ್ ಫೈನಲ್  ಪ್ರವೇಶ ಮಾಡಿದ್ದಾರೆ. ಪ್ರೀ ಕ್ವಾರ್ಟರ್ ಪಂದ್ಯ ಮೊದಲ ಸೆಟ್ ನಲ್ಲಿ 18-21 ಹಿನ್ನಡೆ ಅನುಭವಿಸಿದ ಶ್ರೀಕಾಂತ್ ಬಳಿಕ ಪುಟಿದೆದ್ದು ಮುಂದಿನ ಎರಡೂ ಸೆಟ್ ಗಳನ್ನು 21-19, 22-20 ಅಂಕಗಳ ಅಂತರದಲ್ಲಿ ಗೆದ್ದರು.

ತೀವ್ರ ಕುತೂಹಲ ಕೆರಳಿಸಿದ್ದ ಈ ಪಂದ್ಯ ಒಂದು ಗಂಟೆ 21 ನಿಮಿಷಗಳ ಕಾಲ ನಡೆಯುವುದರೊಂದಿಗೆ ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿತ್ತು. ಅಂತಿಮವಾಗಿ ಈ ಪಂದ್ಯ ಗೆದ್ದ ಶ್ರೀಕಾಂತ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಕ್ವಾರ್ಟರ್ ಫೈನಲ್ ನಲ್ಲಿ ಶ್ರೀಕಾಂತ್ ಚೀನಾದ ಷೀಯುಖಿ ಅವರನ್ನು ಎದುರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com