ಒಡಿಶಾದ ಭುವನೇಶ್ವರದಲ್ಲಿ ನಡೆದ ಪಂದ್ಯದಲ್ಲಿ ಪ್ರಬಲ ಜರ್ಮನಿ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಮಣಿಸುವ ಮೂಲಕ ಭಾರತ ತಂಡ ಈ ಸಾಧನೆ ಗೈದಿದೆ. ಮೂರು ಮತ್ತು ನಾಲ್ಕನೇ ಸ್ಥಾನವನ್ನು ನಿರ್ಣಯಿಸಲು ನಡೆದ ಈ ಪಂದ್ಯದಲ್ಲಿ ಅಪ್ರತಿಮ ಹೋರಾಟ ತೋರಿದ ಭಾರತ ತಂಡ ಜರ್ಮನಿ ತಂಡವನ್ನು 2-1 ಅಂತರದಲ್ಲಿ ಮಣಿಸಿತು. ಆ ಮೂಲಕ ಟೂರ್ನಿಯನ್ನು ಕಂಚಿನ ಪದಕ ಗೆಲ್ಲುವ ಮೂಲಕ ಯಶಸ್ವಿಯಾಗಿ ಪೂರ್ಣಗೊಳಿಸಿತು.