ಕಾಶ್ಮೀರದಲ್ಲಿ ಭಾರತೀಯ ಸೇನೆ 13 ಉಗ್ರರನ್ನು ಹೊಡೆದುರುಳಿಸಿತ್ತು. ಈ ಹಿನ್ನಲೆಯಲ್ಲಿ ಕಾಶ್ಮೀರ ವಿವಾದ ಕುರಿತಂತೆ ಟ್ವೀಟ್ ಮಾಡಿದ್ದ ಅಫ್ರಿದಿಯವರು, ಪಿಒಕೆಯನ್ನು ಭಾರತ ಆಕ್ರಮಿತ ಕಾಶ್ಮೀರ ಎಂದು ಕರೆದಿದ್ದರು. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದೆ. ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಾರ್ವಜನಿಕರಿಗೆ ಭಾರೀ ತೊಂದರೆಯಾಗುತ್ತಿದೆ. ವಿಶ್ವಸಂಸ್ಥೆ (ಯುಎನ್) ಹಾಗೂ ಇನ್ನಿತರೆ ಸಂಸ್ಥೆಗಳು ರಕ್ತಪಾತವನ್ನು ನಿಲ್ಲಿಸಲು ಏಕೆ ಪ್ರಯತ್ನಿಸುತ್ತಿಲ್ಲ ಎಂದು ಬರೆದುಕೊಂಡಿದ್ದರು. ಇದಕ್ಕೆ ಪಾಕಿಸ್ತಾನಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಭಾರತೀಯರಿಂದ ಭಾರೀ ಟೀಕೆಗಳು ವ್ಯಕ್ತವಾಗತೊಡಗಿದ್ದವು.