ಇದರಂತೆ ಮಹಿಳಾ ಈಜುಪಟುಗಳ ಪೋಷಕರು ಬರವಣಿಗೆ ಮೂಲಕವೇ ವಿರೋಧ ವ್ಯಕ್ತಪಡಿಸಿ, ದೂರು ನೀಡಿದ್ದಾರೆ. ಇದಾದ ಬಳಿಕವೂ ಕರ್ಮಾಕರ್ ಅವರು ತಾವು ಅರ್ಜುನ ಪ್ರಶಸ್ತಿ ವಿಜೇತರಾಗಿದ್ದು, ವಿಡಿಯೋವನ್ನು ತೆಗೆದುಹಾಕುವುದಿಲ್ಲ ಎಂದು ವಾದ ಮಾಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಕರ್ಮಾಕರ್ ಅವರನ್ನು ಬಂಧನಕ್ಕೊಳಪಡಿಸಿದರು. ಬಳಿಕ ಅವರನ್ನು ಬಿಡುಗಡೆ ಮಾಡಿದ್ದಾರೆಂದು ತಿಳಿದುಬಂದಿದೆ.