ನವದೆಹಲಿ: 9ನೇ ತರಗತಿಯಿಂದ ೧೨ನೇ ತರಗತಿಯ ಎಲ್ಲಾ ಮಕ್ಕಳು ಪ್ರತಿದಿನ ಆರೋಗ್ಯ ಮತ್ತು ದೈಹಿಕ ಶಿಕ್ಷಣ ತರಗತಿಗಳಲ್ಲಿ ಹಾಜರಿರುವುದನ್ನುಕೇಂದ್ರಿಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ ಇ) ಕಡ್ಡಾಯಗೊಳಿಸಿದ್ದು, ಇದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಕೆಳ ಹಂತದ ತರಗತಿಗಳಲ್ಲೂ ದೈಹಿಕ ಶಿಕ್ಷಣ ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.