"ನಾನು ಸಚಿವರನ್ನು ಸೆ.21 ರಂದು ಸಂಜೆ ಭೇಟಿ ಮಾಡಬೇಕಿತ್ತು. ಆದರೆ ಹಿಂದಿನ ದಿನ ಸಂಜೆ ಕರೆ ಬಂದಿತ್ತು. ಖೇಲ್ ರತ್ನಕ್ಕೆ ನನ್ನ ಹೆಸರನ್ನು ಪರಿಗಣಿಸದೇ ಇರುವುದಕ್ಕೆ ಸಂಬಂಧಿಸಿದಂತೆ ನಾನು ಸಚಿವರ ಬಳಿ ಪ್ರಶ್ನಿಸಿದ್ದೇನೆ, ಸಚಿವರು ಈ ಕುರಿತು ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ. ಖೇಲ್ ರತ್ನಗೆ ನಾಮನಿರ್ದೇಶನಗೊಂಡಿದ್ದ ಕ್ರೀಡಾಪಟುಗಳಾದ ವಿರಾಟ್ ಕೊಹ್ಲಿ ಹಾಗೂ ಮೀರಾಬಾಯ್ ಚನು ಅವರಿಗಿಂತ ಎರಡೂ ಅಂಕಗಳನ್ನು ಹೆಚ್ಚು ಪಡೆದಿದ್ದರೂ ನನ್ನ ಹೆಸರನ್ನು ಪರಿಗಣಿಸಲಾಗಿರಲಿಲ್ಲ ಎಂದು ಭಜರಂಗ್ ಪುನಿಯಾ ಹೇಳಿದ್ದಾರೆ.