ನವದೆಹಲಿ: ಪ್ರಸಕ್ತ ವರ್ಷದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಆಯ್ಕೆ ಮಾಡಲು ಕ್ರೀಡಾ ಸಚಿವಾಲಯ ರಚಿಸಿರುವ 12 ಸದಸ್ಯರ ಸಮಿತಿಗೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಹಾಕಿ ಆಟಗಾರ ಸರ್ದಾರ್ ಸಿಂಗ್ ಅವರನ್ನು ಶುಕ್ರವಾರ ಸೇರ್ಪಡೆಗೊಳಿಸಲಾಗಿದೆ.
ಕಳೆದ ವರ್ಷದಂತೆಯೇ ಈ ಬಾರಿಯೂ ಸಚಿವಾಲಯ ಕ್ರೀಡಾಪಟುಗಳ ಮತ್ತು ಕೋಚ್ ಗಳ ಆಯ್ಕೆಗೆ ಒಂದೇ ಸಮಿತಿಯನ್ನು ರಚಿಸಿದ್ದು, ಸುಪ್ರೀಂ ಕೋರ್ಟ್ ನ ನಿವೃತ್ತಿ ನ್ಯಾಯಮೂರ್ತಿ ಮಕುಂದಕಂ ಶರ್ಮ ಅವರು ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಪ್ಯಾರಾಲಿಂಪಿಕ್ಸ್ ನಲ್ಲಿ ರಜತ ಪದಕ ಗೆದ್ದಿರುವ ದೀಪಾ ಮಲಿಕ್ ಸಹ ಸಮಿತಿಯಲ್ಲಿದ್ದಾರೆ.
ಈ ಬಾರಿಯೂ ಒಂದೇ ಸಮಿತಿಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಸಮಿತಿಗಳು ಹೆಚ್ಚಾದರೆ, ಗೊಂದಲ ಮತ್ತು ಸಮಸ್ಯೆಗಳು ಹೆಚ್ಚಾಗುವುದೇ ಹೊರತು ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಯದು ಎಂದು ಕ್ರೀಡಾ ಸಚಿವಾಲಯ ಹೇಳಿದೆ.
Advertisement