ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ವಿಸ್ತರಣೆ

ಛತ್ರಾಸಲ್ ಕ್ರೀಡಾಂಗಣದಲ್ಲಿ ಕುಸ್ತಿಪಟು ಸಾಗರ್ ಧಂಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಅವರ ಸಹೋದ್ಯೋಗಿ ಅಜಯ್ ಬಕ್ಕರ್ವಾಲಾ ಅವರಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ.
ಸುಶೀಲ್ ಕುಮಾರ್
ಸುಶೀಲ್ ಕುಮಾರ್
Updated on

ನವದೆಹಲಿ: ಛತ್ರಾಸಲ್ ಕ್ರೀಡಾಂಗಣದಲ್ಲಿ ಕುಸ್ತಿಪಟು ಸಾಗರ್ ಧಂಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಅವರ ಸಹೋದ್ಯೋಗಿ ಅಜಯ್ ಬಕ್ಕರ್ವಾಲಾ ಅವರಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ.

ಪೊಲೀಸರು ಇನ್ನೂ ಏಳು ದಿನಗಳ ನೀಡುವಂತೆ ಕೋರಿದ್ದರು. ನ್ಯಾಯಾಧೀಶ ಮಾಯಾಂಕ್ ಗೋಯಲ್ ಉಲ್ಲೇಖಿಸಿ, "ನ್ಯಾಯದ ಹಿತದೃಷ್ಟಿಯಿಂದ, ಪೊಲೀಸರಿಗೆ ಇನ್ನೂ ನಾಲ್ಕು ದಿನಗಳ ಕಸ್ಟಡಿ ನೀಡಬಹುದು ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದಾರೆ. 

ಮೇ 4 ರ ರಾತ್ರಿ ನಡೆದ ಘಟನೆಯ ನಂತರ 38 ವರ್ಷದ ಕುಸ್ತಿಪಟು ಸುಶೀಲ್ ಪರಾರಿಯಾಗಿದ್ದ. ಅವರನ್ನು ಮೇ 23 ರ ಬೆಳಿಗ್ಗೆ ರಾಜಧಾನಿಯ ಮುಂಡ್ಕಾ ಪ್ರದೇಶದಿಂದ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ರೋಹಿಣಿ ನ್ಯಾಯಾಲಯವು ಅವರಿಗೆ ಆರು ದಿನಗಳ ಪೊಲೀಸ್ ಕಸ್ಟಡಿ ನೀಡಿತು, ಅದನ್ನು ಈಗ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com