ನವದೆಹಲಿ: ಛತ್ರಾಸಲ್ ಕ್ರೀಡಾಂಗಣದಲ್ಲಿ ಕುಸ್ತಿಪಟು ಸಾಗರ್ ಧಂಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಅವರ ಸಹೋದ್ಯೋಗಿ ಅಜಯ್ ಬಕ್ಕರ್ವಾಲಾ ಅವರಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ.
ಪೊಲೀಸರು ಇನ್ನೂ ಏಳು ದಿನಗಳ ನೀಡುವಂತೆ ಕೋರಿದ್ದರು. ನ್ಯಾಯಾಧೀಶ ಮಾಯಾಂಕ್ ಗೋಯಲ್ ಉಲ್ಲೇಖಿಸಿ, "ನ್ಯಾಯದ ಹಿತದೃಷ್ಟಿಯಿಂದ, ಪೊಲೀಸರಿಗೆ ಇನ್ನೂ ನಾಲ್ಕು ದಿನಗಳ ಕಸ್ಟಡಿ ನೀಡಬಹುದು ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದಾರೆ.
ಮೇ 4 ರ ರಾತ್ರಿ ನಡೆದ ಘಟನೆಯ ನಂತರ 38 ವರ್ಷದ ಕುಸ್ತಿಪಟು ಸುಶೀಲ್ ಪರಾರಿಯಾಗಿದ್ದ. ಅವರನ್ನು ಮೇ 23 ರ ಬೆಳಿಗ್ಗೆ ರಾಜಧಾನಿಯ ಮುಂಡ್ಕಾ ಪ್ರದೇಶದಿಂದ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ರೋಹಿಣಿ ನ್ಯಾಯಾಲಯವು ಅವರಿಗೆ ಆರು ದಿನಗಳ ಪೊಲೀಸ್ ಕಸ್ಟಡಿ ನೀಡಿತು, ಅದನ್ನು ಈಗ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಗಿದೆ.
Advertisement