ನವದೆಹಲಿ: ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್ನ್ಯಾಶನಲ್ ನಲ್ಲಿ ಕಂಚಿನ ಪದಕ ವಿಜೇತ ಸುಹಾಸ್ ಎಲ್ ಯತಿರಾಜ್ ಇಂದು ಬೆಳಗ್ಗೆ ಸ್ವದೇಶಕ್ಕೆ ಮರಳಿದರು.
ಉತ್ತರ ಪ್ರದೇಶದಲ್ಲಿ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್ ಯತಿರಾಜ್ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ನಂತರ ಮಾತನಾಡಿದ ಅವರು, ನಮ್ಮ ದೇಶಕ್ಕಾಗಿ ಪದಕ ಗೆದ್ದಾಗ ಅದು ತುಂಬಾ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿರುತ್ತದೆ. ಯಾವಾಗಲೂ ಅತ್ಯುತ್ತಮ ಆಟ ಪ್ರದರ್ಶನಕ್ಕೆ ಪ್ರಯತ್ನ ನಡೆಸುತ್ತಿರುತ್ತೇನೆ. ಆಡಳಿತದಲ್ಲಾಗಲಿ ಅಥವಾ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸುವುದಾಗಲಿ ನನ್ನ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇನೆ ಎಂದು ಅವರು ಹೇಳಿದರು.
Advertisement