ಅಭಿನವ್ ಬಳ್ಳಾರಿ
ಅಭಿನವ್ ಬಳ್ಳಾರಿ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್: ಪ್ರಥಮ ಸ್ಥಾನ ಪಡೆದ ಅಭಿನವ್ ಬಳ್ಳಾರಿ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ ಆಯೋಜಿಸಿದ್ದ ೬ನೇ ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಧಾರವಾಡದ ಅಭಿನವ್ ಬಳ್ಳಾರಿ ಪ್ರಥಮ ಸ್ಥಾನ ಗಳಿಸಿದ್ದಾರೆ.
Published on

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ ಆಯೋಜಿಸಿದ್ದ ೬ನೇ ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಧಾರವಾಡದ ಅಭಿನವ್ ಬಳ್ಳಾರಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ಗಂಗಾವತಿಯ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆದ ಈ ಚಾಂಪಿಯನ್ ಶಿಪ್ ನಲ್ಲಿ ೬೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಾಜ್ಯದ ವಿವಿಧ ಜಿಲ್ಲೆಯ ವಿವಿಧ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಿದ್ದರು.

ಧಾರವಾಡದ ಜೆಎಸ್ಎಸ್ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಅಭಿನವ್ ಬಳ್ಳಾರಿ ಶನಿವಾರ ನಡೆದ ಟ್ರೆಡಿಷನಲ್ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಸಂಸ್ಥೆಯ ಅಧ್ಯಕ್ಷರಾದ ಚಂದ್ರೇಗೌಡ ಪೊಲೀಸ್ ಪಾಟೀಲ್ ಹಾಗೂ ಕರಾಟೆ ತರಬೇತುದರಾದ ಧಾರವಾಡದ ವಿಠ್ಠಲ್ ಕಟ್ಟಿಮನಿ ಹಾಗೂ ಕರಾಟೆ ಶಿಕ್ಷಕರಾದ ಫಯಾಜ್, ಶಿಲ್ಪಾ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com