social_icon

ಆತುರದ ನಿರ್ಧಾರ ಕೈಗೊಳ್ಳಬೇಡಿ: ಕುಸ್ತಿಪಟುಗಳಿಗೆ ಭಾರತದ 1983 ವಿಶ್ವಕಪ್‌ ವಿಜೇತ ಕ್ರಿಕೆಟ್‌ ತಂಡ ಮನವಿ

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್‌ ಭೂಷಣ್‌ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಹೋರಾಟ ಮಾಡುತ್ತಿದ್ದಾರೆ.

Published: 03rd June 2023 11:05 AM  |   Last Updated: 03rd June 2023 03:37 PM   |  A+A-


1983 Cricket WC winning team bats for wrestlers

ಪ್ರತಿಭಟನಾ ನಿರತ ಕುಸ್ತಿಪಟುಗಳು

Posted By : Shilpa D
Source : The New Indian Express

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ  ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್‌ ಭೂಷಣ್‌ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಹೋರಾಟ ಮಾಡುತ್ತಿದ್ದಾರೆ. ಈ ಕುರಿತಾಗಿ ಕುಸ್ತಿಪಟುಗಳು ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ ಎಂದು 1983 ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರು ಹೇಳಿದ್ದಾರೆ.

ನಮ್ಮ ಚಾಂಪಿಯನ್‌ ಕುಸ್ತಿಪಟುಗಳೊಂದಿಗೆ ಹೇಗೆ ವರ್ತಿಸಲಾಗುತ್ತಿದೆ ಎಂಬುದನ್ನು ನೋಡಿ ನಮಗೆ ಬಹಳ ಬೇಸರವಾಗಿದೆ. ಅವರು ತಾವು ಕಷ್ಟ ಪಟ್ಟು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಚಿಸುತ್ತಿದ್ದಾರೆಂದು ತಿಳಿದು ಇನ್ನಷ್ಟು ಬೇಸರವಾಗಿದೆ ಎಂದು 1983 ವಿಶ್ವ ಕಪ್‌ ವಿಜೇತ ತಂಡ ಹೇಳಿದೆ.

ಆ ಪದಕಗಳನ್ನು ಬಹಳ ವರ್ಷಗಳ ಪರಿಶ್ರಮ ಹಾಗೂ ಸಾಧನೆಯಿಂದ ಗಳಿಸಲಾಗಿದೆ. ಅವುಗಳು ಅವರ ಸ್ವಂತದ್ದು ಮಾತ್ರವಲ್ಲ, ಬದಲು ದೇಶದ  ಹೆಮ್ಮೆಯಾಗಿವೆ. ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಕೈಗೊಳ್ಳದಂತೆ ಹಾಗೂ ಅವರ ದೂರುಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸಲಾಗುವುದೆಂಬ ಆಶಾವಾದ ಹೊಂದಿದ್ದೇವೆ ಎಂದು ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಕುಸ್ತಿಪಟುಗಳಿಗೆ 'ಲೈಂಗಿಕ ಕಿರುಕುಳ', ಆಯ್ಕೆ ಮಾಡಲು 'sexual favours' ಕೇಳಿದ್ದ WFI ಮುಖ್ಯಸ್ಥ; ಬ್ರಿಜ್ ಭೂಷಣ್ ವಿರುದ್ಧದ 2 FIR ನಲ್ಲೇನಿದೆ?

ದೇಶದ ಕ್ರಿಕೆಟ್‌ ತಂಡ 1983ರಲ್ಲಿ ತನ್ನ ಚೊಚ್ಚಲ ವಿಶ್ವ ಕಪ್‌ ಅನ್ನು ಕಪಿಲ್‌ ದೇವ್‌ ನಾಯಕತ್ವದಲ್ಲಿ ಗೆದ್ದಿತ್ತು. ಆ ತಂಡದಲ್ಲಿ ಸುನೀಲ್‌ ಗಾವಸ್ಕರ್‌, ಮೊಹಿಂದರ್‌ ಅಮರ್‌ನಾಥ್‌, ಕೆ ಶ್ರೀಕಾಂತ್‌, ಸಯ್ಯದ್‌ ಕೀರ್ಮಾನಿ, ಯಶ್ಪಾಲ್‌ ಶರ್ಮ, ಮದನ್‌ ಲಾಲ್‌, ಬಲ್ವಿಂದರ್‌ ಸಿಂಗ್‌ ಸಂಧು, ಸಂದೀಪ್‌ ಪಾಟೀಲ್‌, ಕೀರ್ತಿ ಆಜಾದ್‌, ಮತ್ತು ರೋಜರ್‌ ಬಿನ್ನಿ ಇದ್ದರು. ಅಂತಿಮ ಪಂದ್ಯ ಲಾರ್ಡ್ಸ್‌ ಮೈದಾನದಲ್ಲಿ ಜೂನ್‌ 25, 1983ರಂದು ನಡೆದಿತ್ತು.


Stay up to date on all the latest ಕ್ರೀಡೆ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp