ಬಹುಮಾನದ ಹಣದಲ್ಲಿ ಒಡಿಶಾ ರೈಲು ದುರಂತ ಸಂತ್ರಸ್ತರ ನಿಧಿಗೆ 20 ಲಕ್ಷ ರೂ. ದೇಣಿಗೆ ನೀಡಿದ ಭಾರತ ಫುಟ್ಬಾಲ್ ತಂಡ

ಲೆಬನಾನ್ ತಂಡವನ್ನು 2-0 ಅಂತರದಿಂದ ಸೋಲಿಸಿದ ಭಾರತ ಫುಟ್ಬಾಲ್ ತಂಡ ಇಂಟರ್ ಕಾಂಟಿನೆಂಟಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಭಾರತ ತಂಡಕ್ಕೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು.
ಭಾರತೀಯ ಫುಟ್ಬಾಲ್ ತಂಡ
ಭಾರತೀಯ ಫುಟ್ಬಾಲ್ ತಂಡ
Updated on

ನವದೆಹಲಿ: ಲೆಬನಾನ್ ತಂಡವನ್ನು 2-0 ಅಂತರದಿಂದ ಸೋಲಿಸಿದ ಭಾರತ ಫುಟ್ಬಾಲ್ ತಂಡ ಇಂಟರ್ ಕಾಂಟಿನೆಂಟಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಭಾರತ ತಂಡಕ್ಕೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. ಇದಾದ ಬಳಿಕ ಭಾರತ ಫುಟ್ಬಾಲ್ ತಂಡ ತೆಗೆದುಕೊಂಡ ನಿರ್ಧಾರ ಅಭಿಮಾನಿಗಳ ಮನ ಗೆದ್ದಿದೆ.

ಕೋಚ್ ಇಗೊರ್ ಸ್ಟಿಮ್ಯಾಕ್ ನೇತೃತ್ವದ ಭಾರತೀಯ ಫುಟ್ಬಾಲ್ ತಂಡವು ಒಡಿಶಾ ದುರಂತದ ಸಂತ್ರಸ್ತರಿಗೆ ಬಹುಮಾನದ 20 ಲಕ್ಷ ರೂ.ಗಳನ್ನು ನೀಡಲು ನಿರ್ಧರಿಸಿದೆ. ಈ ಬಗ್ಗೆ ಭಾರತ ಫುಟ್ಬಾಲ್ ತಂಡ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.

ಭಾರತೀಯ ಫುಟ್ಬಾಲ್ ತಂಡ ಟ್ವೀಟ್ ನಲ್ಲಿ 'ನಮ್ಮ ವಿಜಯದ ನಂತರ ತಂಡಕ್ಕೆ ಬಹುಮಾನದ ಹಣವನ್ನು ನೀಡಿದ ಒಡಿಶಾ ಸರ್ಕಾರಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಇದಾದ ನಂತರ, ಈ ತಿಂಗಳ ಆರಂಭದಲ್ಲಿ ರೈಲು ಅಪಘಾತದಲ್ಲಿ ದುರದೃಷ್ಟವಶಾತ್ ಪ್ರಾಣಹಾನಿಗೆ ತುತ್ತಾಗಿರುವ ಕುಟುಂಬಗಳ ಪರಿಹಾರ ಮತ್ತು ಪುನರ್ವಸತಿಗಾಗಿ ನಾವು ಆ ಬಹುಮಾನದ ಹಣದಿಂದ 20 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುವುದಾಗಿ ಡ್ರೆಸ್ಸಿಂಗ್ ರೂಮ್‌ನಲ್ಲಿ ಸರ್ವಾನುಮತದಿಂದ ನಿರ್ಧರಿಸಿದ್ದೇವೆ. ಜನರು ಅನುಭವಿಸಿದ ನಷ್ಟವನ್ನು ಯಾರೂ ಸರಿದೂಗಿಸಲು ಸಾಧ್ಯವಿಲ್ಲ, ಆದರೆ ಈ ಕಷ್ಟದ ಸಮಯದಲ್ಲಿ ಕುಟುಂಬಗಳಿಗೆ ಈ ಮೊತ್ತವು ಸಣ್ಣ ಸಹಾಯವನ್ನು ನೀಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಅದು ಹೇಳಿದೆ.

ಭಾನುವಾರ ನಡೆದ ಇಂಟರ್‌ಕಾಂಟಿನೆಂಟಲ್ ಕಪ್‌ನ ಫೈನಲ್‌ನಲ್ಲಿ ನಾಯಕ ಸುನಿಲ್ ಛೆಟ್ರಿ ಮತ್ತು ಲಾಲಿಯಾಂಜುವಾಲಾ ಚಾಂಗ್ಟೆ ಅವರ ಗೋಲುಗಳ ನೆರವಿನಿಂದ ಭಾರತ 2-0 ಗೋಲುಗಳಿಂದ ಲೆಬನಾನ್ ಅನ್ನು ಸೋಲಿಸುವ ಮೂಲಕ ಇಂಟರ್‌ಕಾಂಟಿನೆಂಟಲ್ ಕಪ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಭಾರತ ಎರಡನೇ ಬಾರಿಗೆ ಈ ಪ್ರಶಸ್ತಿ ಗೆದ್ದಿದೆ. 2018ರಲ್ಲಿ ಕೀನ್ಯಾವನ್ನು ಸೋಲಿಸುವ ಮೂಲಕ ಭಾರತ ಟ್ರೋಫಿಯನ್ನು ಗೆದ್ದುಕೊಂಡಿತು. 2019ರಲ್ಲಿ ಭಾರತವು ನಾಲ್ಕನೇ ಮತ್ತು ಕೊನೆಯ ಸ್ಥಾನಕ್ಕೆ ತೃಪ್ತಿಗೊಂಡಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com