ಪ್ರೀತಂ ಶೆಟ್ಟಿ
ಕ್ರೀಡೆ
ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ
ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ
ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪ್ರೀತಂ ಅವರು ಉದ್ಯೋಗಕ್ಕಾಗಿ ಕೆಲವೇ ದಿನಗಳಲ್ಲಿ ವಿದೇಶಕ್ಕೆ ತೆರಳಲು ತಯಾರಿ ನಡೆಸಿದ್ದರು. ಅವರಿಗೆ ತಾಯಿ ಮತ್ತು ಸಹೋದರ ಇದ್ದಾರೆ.


