ಬೆಂಗಳೂರು ಸ್ಫೋಟ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು (ಸಾಂದರ್ಭಿಕ ಚಿತ್ರ)
ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು (ಸಾಂದರ್ಭಿಕ ಚಿತ್ರ)

ಬೆಂಗಳೂರು: ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬಾಂಬ್ ಸ್ಫೋಟಗೊಂಡ ಹೊಟೆಲ್ ನ ಭದ್ರತಾ ಸಿಬ್ಬಂದಿ ಮತ್ತು ಸಮೀಪದಲ್ಲಿರು ಪಾನ್ ಶಾಪ್ ಅಂಗಡಿಯಾತನನ್ನು ಪೊಲೀಸರು ಶಂಕೆಯ ಮೇರೆಗೆ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಾಂಬ್ ಸ್ಫೋಟದಲ್ಲಿ ಸ್ಥಳೀಯರ ಕೈವಾಡದ ಶಂಕೆಯ ಮೇರೆಗೆ ಪೊಲೀಸರು ಈ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹಸಚಿವರ ಕರೆ
ಇದೇ ವೇಳೆ ಬಾಂಬ್ ಸ್ಫೋಟ ವಿಚಾರ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿರುವ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು,ಲ ಘಟನೆಯ ವಿವರ ಕೋರಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ರಾಜ್ಯದ ಭದ್ರತಾ ದೃಷ್ಟಿಯ ಹಿನ್ನಲೆಯಲ್ಲಿ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಸ್ತುತ ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು ಆಗಮಿಸಿದ್ದು, ಘಟನಾ ಸ್ಥಳದಲ್ಲಿ ಪರೀಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com