ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ: ಮೋದಿ
ನವದೆಹಲಿ: ಇಂದಿನಿಂದ ಸಂಸತ್ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಹೇಳುವ ಮೂಲಕ, ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚಿಸಿದ್ದಾರೆ.
ಚಳಿಗಾಲದ ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, 'ಸರ್ಕಾರ ನಡೆಸುವ ಜವಾಬ್ದಾರಿಯನ್ನು ಜನ ನಮಗೆ ನೀಡಿದ್ದಾರೆ. ಆದರೆ ದೇಶ ಮುನ್ನಡೆಸುವ ಜವಾಬ್ದಾರಿ ಎಲ್ಲ ಸಂಸದರ ಮೇಲಿದೆ' ಎಂದು ಹೇಳಿದ್ದಾರೆ.
'ಈ ತಂಪಾದ ವಾತಾವರಣದಲ್ಲಿ, ಕೂಲ್ ಆಗಿಯೇ ನಾವು ಸಾಕಷ್ಟು ಕೆಲಸ ಮಾಡಬೇಕಾಗಿದೆ. ಅಧಿವೇಶನ ಸುಗಮವಾಗಿ ನಡೆಯಲಿದೆ ಎಂಬ ವಿಶ್ವಾಸವಿದೆ' ಎಂದು ಪ್ರಧಾನಿ ತಿಳಿಸಿದರು. ಅಲ್ಲದೆ ಪ್ರತಿಪಕ್ಷಗಳು ಸಹ ಉತ್ತಮ ಚರ್ಚೆಗೆ ಅವಕಾಶ ನೀಡಲಿವೆ ಎಂಬ ವಿಶ್ವಾಸವಿದೆ ಎಂದರು.
ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಎರಡನೇ ಅಧಿವೇಶನ ಇದಾಗಿದ್ದು, ಚಳಿಗಾಲದ ಅಧಿವೇಶನವಾದರೂ ಸಂಸತ್ನಲ್ಲಿ ಬಿಸಿ ಬಿಸಿ ಚರ್ಚೆಗಳೇ ಹೆಚ್ಚು ನಡೆಯುವ ಸಾಧ್ಯತೆ ಇದೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಸರ್ಕಾರ ಕೆಲವೊಂದು ಮಹತ್ವಾಕಾಂಕ್ಷಿ ಆರ್ಥಿಕ ಅಜೆಂಡಾಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ