ಟಿವಿ 9 ಪ್ರಸಾರ ಸ್ಥಗಿತ: ಸರ್ಕಾರದ ಪಾತ್ರ ಇಲ್ಲ ಎಂದ್ರು ಸಿಎಂ

ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಟಿವಿ 9 ಹಾಗೂ ನ್ಯೂಸ್ 9 ಸುದ್ದಿ ವಾಹಿನಿಗಳ ಪ್ರಸಾರ ಸ್ಥಗಿತ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಟಿವಿ 9 ಹಾಗೂ ನ್ಯೂಸ್ 9 ಸುದ್ದಿ ವಾಹಿನಿಗಳ ಪ್ರಸಾರ ಸ್ಥಗಿತಗೊಳಿಸುವುದರಲ್ಲಿ ಸರ್ಕಾರದ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಮಾಧ್ಯಮಗಳ ವಿರೋಧಿಯಲ್ಲ. ಟಿವಿ 9 ಪ್ರಸಾರ ಸ್ಥಗಿತಗೊಳಿಸಿರುವುದರಲ್ಲಿ ಸರ್ಕಾರದ ಅಥವಾ ಸಚಿವರ ಕೈವಾಡ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಈ ಬಗ್ಗೆ ಕೇಬಲ್ ಆಪರೇಟರ್ಸ್ ಹಾಗೂ ಮಾಧ್ಯಮ ಸಂಸ್ಥೆ ಮುಖ್ಯಸ್ಥರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಕೇಬಲ್ ಆಪರೇಟರ್‌ಗಳ ನಡುವೆ ಸಭೆ ನಡೆದಿತ್ತು. ಈ ವೇಳೆ ಎರಡೂ ಸುದ್ದಿವಾಹಿನಿಗಳ ಕೇಬಲ್ ಮೂಲಕ ಪ್ರಸಾರವನ್ನು ಸ್ಧಗಿತಗೊಳಿಸುವಂತೆ ಆದೇಶಿಸಿದ್ದರು. ಇಲ್ಲವಾದರೆ ಕೇಬಲ್ ಸಂಸ್ಥೆಗಳ ಮೇಲೆ ಭಾರಿ ತೆರಿಗೆ ಹಾಗೂ ದಂಡ ವಿಧಿಸುವುದಾಗಿ ಸಚಿವರು ಹೇಳಿದ್ದರೆಂದು ಚಾನೆಲ್ ಆರೋಪಿಸಿದೆ. ಆದರೆ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಡಿಕೆಶಿ, ಸುದ್ದಿ ವಾಹಿನಿ ಸ್ಥಗಿತಕ್ಕೆ ನಾನಾಗಲಿ, ನಮ್ಮ ಸರ್ಕಾರವಾಗಲಿ ಕಾರಣವಲ್ಲ ಎಂದಿದ್ದಾರೆ.

ಟಿವಿ 9 ಪ್ರಸಾರ ಸ್ಥಗಿತಗೊಳಿಸುವಂತೆ ನಾನು ಆದೇಶಿಸಿಲ್ಲ. ನಾನು ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ನಂಬಿಕೆ ಇರಿಸಿಕೊಂಡವನು. ಮಾಧ್ಯಮ ಸ್ವಾತಂತ್ರ್ಯ ಕಾಪಾಡಲು ನಾನು ಬದ್ಧ. ವೈಯಕ್ತಿಕ ದ್ವೇಷದಿಂದ ಸತತವಾಗಿ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಸಿ ನನ್ನ ತೇಜೋವಧೆ ಮಾಡಿದ್ದಾರೆ. ನಾನು ಈ ಬಗ್ಗೆ ನಾನು ನ್ಯಾಯಾಲಯಕ್ಕೆ ಹೋಗಲು ಸಿದ್ಧ ಎಂದು ಡಿಕೆ ಶಿವಕುಮಾರ್ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com