ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ೧೨೪ ನೆ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಟ್ವೀಟ್ ಮಾಡುವ ಮೂಲಕ ನನಪಿಸಿಕೊಂಡಿದ್ದಾರೆ.
"ಡಾ. ಬಿ ಆರ್ ಅಂಬೇಡ್ಕರ್ ಜನ್ಮ ದಿನವಾದ ಇಂದು ಅವರಿಗೆ ತಲೆಬಾಗುತ್ತೇನೆ. ಜೈ ಭೀಮ್" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಅಂಬೇಡ್ಕರ ಅವರ ಜನ್ಮ ದಿನವನ್ನು ಸ್ಮರಿಸಲು ಗೂಗಲ್ ಇಂಡಿಯಾ ಸಂಸ್ಥೆ ವಿಶೇಷ ಡೂಡಲ್ ಬರೆದಿದೆ.
ಹಾಗೆಯೇ ವಿವಿಧ ರಾಜಕೀಯ ಪಕ್ಷಗಳು ರಾಷ್ಟ್ರದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.
ರಾಜಕಾರಿಣಿ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕ ಅಂಬೇಡ್ಕರ್ ಅವರು ಭಾರತದಲ್ಲಿನ ಅಸಮಾನತೆಯನ್ನು ತೊಡೆದುಹಾಕಲು ಅವಿರತವಾಗಿ ಶ್ರಮಿಸಿದ್ದರು. ದಲಿತ ಐಕಾನ್ ಎಂದೆ ಕರೆಯಲಾಗುವ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ೧೯೯೦ ರಲ್ಲಿ ಅವರಿಗೆ ಭಾರತರತ್ನ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು.
Advertisement