ಮಂಡ್ಯದಲ್ಲಿ ಧ್ವಜಾರೋಹಣ ಮಾಡಲು ಬಂದಿದ್ದ ಸಚಿವ ಅಂಬರೀಶ್ ಗೆ ಘೇರಾವ್

69ನೇ ಸ್ವಾತಂತ್ರ್ಯೋತ್ಸವ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಧ್ವಜಾರೋಹಣ ಮಾಡಲು ಬಂದಿದ್ದ ಸಚಿವ ಅಂಬರೀಶ್ ಗೆ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ...
ಅಂಬರೀಶ್
ಅಂಬರೀಶ್
Updated on
ಮಂಡ್ಯ: 69ನೇ ಸ್ವಾತಂತ್ರ್ಯೋತ್ಸವ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಧ್ವಜಾರೋಹಣ ಮಾಡಲು ಬಂದಿದ್ದ ಸಚಿವ ಅಂಬರೀಶ್ ಗೆ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. 
ವಸತಿ ಸಚಿವರಾಗಿರುವ ಅಂಬರೀಶ್ ಮಂಡ್ಯದ ಜಿಲ್ಲಾ ಉಸ್ತುವಾರಿಯಾಗಿದ್ದು ಇಂದು ಧ್ವಜಾರೋಹಣ ಮಾಡಲು ಬಂದಿದ್ದಂತ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. 
ಮಂಡ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ನಡೆಯುತ್ತಿದ್ದರೂ ಯಾವುದೇ ಕ್ರಮಕೈಗೊಂಡಿದ್ದಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 
ಈ ವೇಳೆ ಪ್ರತಿಭಟನಾಕಾರರ ಜತೆ ಹಸನ್ಮುಖಿಯಾಗಿ ಮಾತನಾಡಿದ ಅಂಬರೀಶ್, ಈ ಸಂಬಂಧ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದರು. ಅಲ್ಲದೆ ಒಳ್ಳೆ ಕೆಲಸಗಳಾಗುವಾಗ ಅದಕ್ಕೆ ಅಡ್ಡಿ ಮಾಡಬಾರದು ಎಂದು ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com