ಲೋಕಾಯುಕ್ತ ಲಂಚ ಪ್ರಕರಣ: ರಿಯಾಜ್ ಜಾಮೀನು ಅರ್ಜಿ ವಜಾ

ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಹಗರಣದಲ್ಲಿ ಕೆಪಿಸಿಸಿ ಸದಸ್ಯ ಉದ್ಯಮಿ ಪಿ.ಎನ್. ಕೃಷ್ಣಮೂರ್ತಿ ಪ್ರಕರಣದ ಆರೋಪಿ ಸೈಯದ್ ರಿಯಾಜ್ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ...
ಲೋಕಾಯುಕ್ತ ಕಚೇರಿ (ಸಂಗ್ರಹ ಚಿತ್ರ)
ಲೋಕಾಯುಕ್ತ ಕಚೇರಿ (ಸಂಗ್ರಹ ಚಿತ್ರ)

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಹಗರಣದಲ್ಲಿ ಕೆಪಿಸಿಸಿ ಸದಸ್ಯ ಉದ್ಯಮಿ ಪಿ.ಎನ್. ಕೃಷ್ಣಮೂರ್ತಿ ಪ್ರಕರಣದ ಆರೋಪಿ ಸೈಯದ್ ರಿಯಾಜ್ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ರಿಯಾಜ್‍ಗೆ ಜಾಮೀನು ನೀಡದಂತೆ ಎಸ್‍ಐಟಿ ಪೊಲೀಸರು ನ್ಯಾಯಾಲಯದಲ್ಲಿ
ಮನವಿ ಸಲ್ಲಿಸಿದ್ದರು. ಗುರುವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪೊಲೀಸರ ಮನವಿ ಪರಿಗಣಿಸಿ ಅರ್ಜಿ ವಜಾಗೊಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಮೊಹಮದ್ ಸಾ„ಕ್‍ನನ್ನು ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com