ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಹಗರಣದಲ್ಲಿ ಕೆಪಿಸಿಸಿ ಸದಸ್ಯ ಉದ್ಯಮಿ ಪಿ.ಎನ್. ಕೃಷ್ಣಮೂರ್ತಿ ಪ್ರಕರಣದ ಆರೋಪಿ ಸೈಯದ್ ರಿಯಾಜ್ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ರಿಯಾಜ್ಗೆ ಜಾಮೀನು ನೀಡದಂತೆ ಎಸ್ಐಟಿ ಪೊಲೀಸರು ನ್ಯಾಯಾಲಯದಲ್ಲಿ
ಮನವಿ ಸಲ್ಲಿಸಿದ್ದರು. ಗುರುವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪೊಲೀಸರ ಮನವಿ ಪರಿಗಣಿಸಿ ಅರ್ಜಿ ವಜಾಗೊಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಮೊಹಮದ್ ಸಾ„ಕ್ನನ್ನು ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ.
Advertisement