ತಮಿಳುನಾಡಿನಲ್ಲಿ ಜಲ ಪ್ರಳಯ: ಕೇಂದ್ರದಿಂದ 1 ಸಾವಿರ ಕೋಟಿ ಬಿಡುಗಡೆಗೆ ಪ್ರಧಾನಿ ಸೂಚನೆ

ಕೇಂದ್ರ ಸರ್ಕಾರ ತಮಿಳುನಾಡು ಜನತೆಯ ನೆರವಿಗೆ ಇದೆ, ಪರಿಹಾರ ಕಾರ್ಯಗಳಿಗೆ ಒಟ್ಟು 1940 ಕೋಟಿ ನೀಡಲಾಗಿದೆ ಎಂದು...
ಜಯಲಲಿತಾ - ನರೇಂದ್ರ ಮೋದಿ
ಜಯಲಲಿತಾ - ನರೇಂದ್ರ ಮೋದಿ
Updated on

ಚೆನ್ನೈ: ಕೇಂದ್ರ ಸರ್ಕಾರ ತಮಿಳುನಾಡು ಜನತೆಯ ನೆರವಿಗೆ ಇದೆ, ಪರಿಹಾರ ಕಾರ್ಯಗಳಿಗೆ ಒಟ್ಟು 1940 ಕೋಟಿ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ಇಂದು ಚೆನ್ನೈನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಹಾಗೂ ರಾಜ್ಯಪಾಲ ಕೆ.ರೋಸಯ್ಯ ಅವರೊಂದಿಗೆ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ, ಪ್ರವಾಹ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ 940 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಇನ್ನೂ 1 ಸಾವಿರ ಕೋಟಿ ರುಪಾಯಿ ತಕ್ಷಣ ಬಿಡುಗಡೆ ಮಾಡುವಂತೆ ಸೂಚಿಸಲಾಗಿದೆ ಎಂದರು.

ಧಾರಾಕಾರ ಮಳೆಯಿಂದಾಗಿ ಚೆನ್ನೈ ಮಹಾನಗರ ಸಂಪೂರ್ಣ ಜಲಾವೃತಗೊಂಡಿದ್ದು, ಮುಖ್ಯಮಂತ್ರಿ ಜಯಲಲಿತಾ ಅವರು ಹೆಲಿಕಾಪ್ಟರ್ ಮೂಲಕ ವೈಮಾನಿಕೆ ಸಮೀಕ್ಷೆ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಹ ವೈಮಾನಿಕ ಸಮೀಕ್ಷೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com