ಬೆಂಗಳೂರು: ಕುಂಭದ್ರೋಣ ಮಳೆಯಿಂದ ಉಂಟಾಗಿರುವ ಜಲ ಪ್ರಳಯದಿಂದ ತತ್ತರಿಸಿರುವ ತಮಿಳುನಾಡಿಗೆ ಜೆಡಿಎಸ್ ಪಕ್ಷದಿಂದ ಒಂದು ಕೋಟಿ ರುಪಾಯಿ ನೆರವು ನೀಡಲು ನಿರ್ಧರಿಸಿದೆ.
ಇಂದು ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಜಲ ಪ್ರಳಯದಿಂದ ತತ್ತರಿಸಿರುವ ತಮಿಳುನಾಡು ಪರಿಹಾರ ಕಾರ್ಯಕ್ಕೆ ನೆರವಾಗಲು 1 ಕೋಟಿ ರುಪಾಯಿ ನೀಡಲು ನಿರ್ಧರಿಸಲಾಯಿತು ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಅವರು ತಿಳಿಸಿದ್ದಾರೆ.
ವಾಯುಭಾರ ಕುಸಿತದಿಂದಾಗಿ ಚೆನ್ನೈನಲ್ಲಿ ಕುಂಭದ್ರೋಣ ಮಳೆಯಾಗುತ್ತಿದೆ. ಕಳೆದ 1 ತಿಂಗಳಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ತತ್ತರಿಸಿದ್ದ ಚೆನ್ನೈನಲ್ಲಿ ಮತ್ತೆ ಮಳೆಯಾಗುತ್ತಿದ್ದು, ನಗರವೆಲ್ಲಾ ಸಂಪೂರ್ಣ ಜಲಮಯವಾಗಿದೆ.
Advertisement