7 ತಿಂಗಳ ಗಬಿರ್sಣಿ ಸೇರಿ 100ರಷ್ಟು ಮಂದಿಯನ್ನು ರಕ್ಷಿಸಲಾಗಿದೆ. ಜತೆಗೆ, ಗುರುವಾರ ಬೆಳಗ್ಗೆ ರಕ್ಷಣೆ, ಆಹಾರ, ರೇಲ್ವೆ, ಕೃಷಿ, ಆರೋಗ್ಯ, ಟೆಲಿಕಮ್ಯೂನಿಕೇಷನ್ ಇಲಾಖೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಭಾರತೀಯ ಹವಾಮಾನ ಇಲಾಖೆ ಮತ್ತು ಎನ್ ಡಿಆರ್ಎಫ್ ಅಧಿಕಾರಿಗಳು ಸಭೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ, ರಾಜ್ಯಕ್ಕೆ ರು.5 ಸಾವಿರ ಕೋಟಿ ಪರಿಹಾರ ಮೊತ್ತ ಒದಗಿಸುವಂತೆ ಸಿಎಂ ಜಯಲಲಿತಾ ಅವರು ಪ್ರಧಾನಿ ಮೋದಿ ಅವರನ್ನು ಕೇಳಿಕೊಂಡಿದ್ದಾರೆ.