ಬಿಜೆಪಿ ಈಗಾಗಲೇ 12 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಭಾನುವಾರ ಮತ್ತೆ 8 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಕಾಂಗ್ರೆ¸, ಜೆಡಿಎಸ್ನಲ್ಲಿ ಟಿಕೆಟ್ ವಂಚಿತರಿಗೆ ಗಾಳ ಹಾಕುವ ಪ್ರಯತ್ನದಲ್ಲಿ ಬಿಜೆಪಿ ಯಶಸ್ವಿಯಾಗಿದೆ. ತುಮಕೂರಿ- ನಿಂದ ಜೆಡಿಎಸ್ ಟಿಕೆಟ್ ವಂಚಿತರಾಗಿದ್ದ ಹಾಲಿ ಸದಸ್ಯ ಡಾ.ಹುಲಿನಾಯ್ಕರ್ ಗೆ ಬಿಜೆಪಿ ಅವಕಾಶ ಕಲ್ಪಿಸಿದೆ. ಇದರೊಂದಿಗೆ ಅಭ್ಯರ್ಥಿ ಆಯ್ಕೆ ಅಭ್ಯರ್ಥಿ ಆಯ್ಕೆ ಮಾಡುವ ಬಿಜೆಪಿ ಕಸರತ್ತು ಮುಕ್ತಾಯವಾದಂತಾಗಿದ್ದು, ಸೋಮವಾರದಿಂದ ನಾಮಪತ್ರ ಸಲ್ಲಿಕೆ ಕಾರ್ಯಾರಂಭದ ಮೂಲಕ ಹೋರಾಟಕ್ಕೆ ಧುಮುಕಲಿದೆ.