ಕೈಲಾಗದಿದ್ದರೆ ಕೆಲಸ ಬಿಟ್ಟು ಹೋಗಿ: ಅಧಿಕಾರಿಗಳಿಗೆ ಸಿಎಂ ತರಾಟೆ

ಯೋಜನೆಗಳನ್ನು ಜಾರಿಗೊಳಿಸಿದ ಅಧಿಕಾರಿಗಳಿಗೆ ಮಂಗಳವಾರ ಮಂಗಳರಾತಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಜೆಟ್ ನಲ್ಲಿ ಸರ್ಕಾರ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಯೋಜನೆಗಳನ್ನು ಜಾರಿಗೊಳಿಸಿದ ಅಧಿಕಾರಿಗಳಿಗೆ ಮಂಗಳವಾರ ಮಂಗಳರಾತಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಜೆಟ್ ನಲ್ಲಿ ಸರ್ಕಾರ ಒದಗಿಸಿರುವ ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ಕಾರಿ ಅಧಿಕಾರಿಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ, ಏನು ನೀವು ತಿಂಗಳಿಗೆ ಸರಿಯಾಗಿ ಸಂಬಳ ತಗೋಳ್ತಿರಲ್ಲಾ...ನೀವು ಮಾಡೋ ತಪ್ಪಿಂದ ಜನ ಪ್ರತಿನಿಧಿಗಳಾದ ನಮಗೆ ತರಾಟೆಗೆ ತೆಗೆದುಕೊಳ್ಳುತ್ತಾರೆ. ಕೈಲಾಗದಿದ್ದರೆ ಕೆಲಸ ಬಿಟ್ಟು ಹೊರಡಿ ಆಕ್ರೋಷ ವ್ಯಕ್ತ ಪಡಿಸಿದರು.

ಹೈದರಾಬಾದ್‌ ಕರ್ನಾಟಕ ಭಾಗ ಸೇರಿದಂತೆ ವಿವಿಧ ಯೋಜನೆಗಳು ಜಾರಿಯಾಗದ ಹಿನ್ನಲೆ ಯಲ್ಲಿ ಸಿಟ್ಟಾದ ಮುಖ್ಯಮಂತ್ರಿಗಳು ಕೊಟ್ಟ ಅನುದಾನ ಬಳಕೆ ಮಾಡದೆ ಇರುವುದು ಯಾಕೆ? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜೂನ್‌ ತಿಂಗಳ ಒಳಗೆ ವಿವಿಧ ಯೋಜನೆಗಳಿಗೆ ಮೀಸಲಾದ ಅನುಧಾನವನ್ನು ಖರ್ಚು ಮಾಡುವಂತೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com