ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ ಬಳಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದ ಘಟನೆ ಸೋಮವಾರ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಹಳಿ ಬದಲಾವಣೆ ವೇಳೆ ಮೈಸೂರಿನಿಂದ ದಾದರ್ ಗೆ ತೆರಳುತ್ತಿದ್ದ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದ ಅವಘಡ ನಡೆದಿದ್ದು,ರೈಲಿನ ಇಂಜಿನ್ ಹಿಂಭಾಗದಲ್ಲಿರುವ ಎರಡು ಜನರಲ್ ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದೆ.
ಘಟನೆಯಿಂಧ ಬೋಗಿಗಳು ಜಖಂಗೊಂಡಿದ್ದು, ಬೋಗಿಗಳಲ್ಲಿ ಪ್ರಯಾಣಿಕರು ಇಲ್ಲದಿದ್ದರಿಂದ ಸಧ್ಯ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಇದರಿಂದ ಬಾರಿ ಅನಾಹುತ ತಪ್ಪಿದೆ.
ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
Advertisement