ಈ ಸಂಬಂಧ ಇಂದು ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಶಿ, ಶಾಂತ ಕುಮಾರ್ ಹಾಗೂ ಯಶವಂತ್ ಸಿನ್ಹಾ ಅವರು ಸಭೆ ಸೇರಿ, ಜೇಟ್ಲಿ ವಿರುದ್ಧ ಆರೋಪ ಹಾಗೂ ಬಿಜೆಪಿ ಸಂಸದ ಕೀರ್ತಿ ಆಜಾದ್ ಅಮಾನತು ಕುರಿತು ಚರ್ಚಿಸಿದ್ದಾರೆ. ಅಲ್ಲದೆ ಈ ಎರಡೂ ವಿಷಯಗಳನ್ನು ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.