ಆಟೋ ರಿಕ್ಷಾ ಪರವಾನಿಗೆ ಹಗರಣ: ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆಗೆ ಬಿಜೆಪಿ ಆಗ್ರಹ

ಆಟೋ-ರಿಕ್ಷಾ ಪರವಾನಿಗೆ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ.
ಗೋಪಾಲ್ ರೈ
ಗೋಪಾಲ್ ರೈ

ನವದೆಹಲಿ: ಆಟೋ ರಿಕ್ಷಾ ಪರವಾನಿಗೆ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ.
ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಭಾಗಿಯಾಗಿದ್ದು ಗೋಪಾಲ್ ರೈ ರಾಜೀನಾಮೆಗೆ ಆಗ್ರಹಿಸಿ ಡಿ.28 ರಂದು ಬಿಜೆಪಿ ದೆಹಲಿ ಘಟಕ ಪ್ರತಿಭಟನೆ ನಡೆಸಲಿದೆ ಎಂದು ದೆಹಲಿ ಬಿಜೆಪಿ ಮುಖಂಡ ಸತೀಶ್ ಉಪಾಧ್ಯಾಯ ಹೇಳಿದ್ದಾರೆ. ಆಟೋ-ರಿಕ್ಷಾ ಪರವಾನಿಗೆ ಹಗರಣದ ಬಗ್ಗೆ ದೆಹಲಿ ಸಾರಿಗೆ ಇಲಾಖೆಯಿಂದ ವರದಿ ಪಡೆಯುವಂತೆ ಬಿಜೆಪಿ ದೆಹಲಿ ರಾಜ್ಯಪಾಲ ಲೆಫ್ಟಿನೆಂಟ್ ಗೌರ್ನರ್ ಗೆ ಮನವಿ ಮಾಡಿದ್ದು, ಪ್ರಕರಣವನ್ನು ಭ್ರಷ್ಟಾಚಾರ ನಿಗ್ರಹ ದಳದ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮವೆಸಗಿದ್ದ ಮೂವರು ಅಧಿಕಾರಿಗಳನ್ನು ದೆಹಲಿ  ಅಮಾನತು ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com