ಪ್ರವೀಣ್ ತೊಗಾಡಿಯಾ
ಪ್ರವೀಣ್ ತೊಗಾಡಿಯಾ

ಬೆಂಗಳೂರಿಗೆ ಬರದಂತೆ ಪ್ರವೀಣ್ ತೊಗಾಡಿಯಾಗೆ ನಿಷೇಧ

Published on

ಬೆಂಗಳೂರು: ವಿಶ್ವ ಹಿಂದೂ ಪರಿಷತ್‌ನ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಅವರಿಗೆ ಬೆಂಗಳೂರು ನಗರ ಪ್ರವೇಶಿಸದಂತೆ ಬೆಂಗಳೂರು ಪೊಲೀಸರು ನಿಷೇಧ ಹೇರಿದ್ದಾರೆ.

ಫೆಬ್ರವರಿ 8ರಂದು ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯುವ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸಲು ತೊಗಾಡಿಯಾ ಬೆಂಗಳೂರಿಗೆ ಬರುತ್ತಿದ್ದರು. ಆದರೆ ತೊಗಾಡಿಯಾ ಅವರು ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ತೊಗಾಡಿಯಾ ನಗರ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರ ಆದೇಶದನ್ವಯ ಪ್ರವೀಣ್ ತೊಗಾಡಿಯಾ ಅವರು ಫೆಬ್ರವರಿ 5ರಿಂದ ಫೆಬ್ರುವರಿ 10ರವರೆಗೆ ಬೆಂಗಳೂರು ನಗರಕ್ಕೆ ಪ್ರವೇಶ ಮಾಡುವಂತಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com