ಮುಸ್ಲಿಮರು ವಿಶಾಲ ಮನೋಭಾವ ಹೊಂದಬೇಕು: ಶಿಯಾ ಧರ್ಮಗುರು

ಹೆಚ್ಚೆಚ್ಚು ಆಧುನಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಮುಸ್ಲಿಮರು ವಿಶಾಲ ಮನೋಭಾವ ಹೊಂದಬೇಕು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಜ್ಜಫರನಗರ: ಹೆಚ್ಚೆಚ್ಚು ಆಧುನಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಮುಸ್ಲಿಮರು ತಮ್ಮ ಮನಸ್ಸನ್ನು  ವಿಶಾಲಗೊಳಿಸಿಕೊಳ್ಳಬೇಕು ಎಂದು ಶಿಯಾ ಮುಸ್ಲಿಂ ಧರ್ಮಗುರು ಮೌಲಾನ ಕಾಲ್ಬೆ ಸಾಧಿಕ್ ಹೇಳಿದ್ದಾರೆ.

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಲಿಯ ಉಪಾಧ್ಯಕ್ಷರಾಗಿರುವ ಸಾಧಿಕ್ ಮುಸ್ಲಿಮರು ಹೆಚ್ಚೆಚ್ಚು ಆಧುನಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವತ್ತ ಗಮನಹರಿಸಿ ಉತ್ತಮ ಮಟ್ಟದ ಶಿಕ್ಷಣ ಕೊಡುವ ಬಗ್ಗೆ ಚಿಂತಿಸಬೇಕು ಈ ರೀತಿ ತಮ್ಮ ಮನಸ್ಸನ್ನು ವಿಶಾಲಗೊಳಿಸಿಕೊಳ್ಳಬೇಕು ಎಂದಿದ್ದಾರೆ.

ಮೋರ್ನಾ ಪಟ್ಟಣದಲ್ಲಿ ನೆನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇಸ್ಲಾಂ ನಲ್ಲಿ ಮನುಷ್ಯರ ಮೇಲೆ ಯಾವುದೆ ಹಿಂಸೆಗೆ ಮತ್ತು ದೌರ್ಜನ್ಯಕ್ಕೆ ಜಾಗವಿಲ್ಲ ಎಂದಿದ್ದಾರೆ.

ಬೇರೆಯವರ ತೊಂದರೆಗಳಿಗೆ ಸಹಾಯ ಮಾಡುವುದು ಮನುಷ್ಯನ ಕರ್ತವ್ಯ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com