ಜಾರಕಿಹೊಳಿಗೆ ಹೆಚ್ಚುವರಿ ಖಾತೆ ನೀಡಲು ಸಿಎಂ ನಿರ್ಧಾರ

ಖಾತೆ ಬದಲಾವಣೆ ಬಯಸಿ ರಾಜಿನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಖಾತೆ ಬದಲಾವಣೆ ಬಯಸಿ ರಾಜಿನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿ ಖಾತೆ 'ಭಾಗ್ಯ' ದಯಪಾಲಿಸಲು ಮುಂದಾಗಿದ್ದಾರೆ.

ಈ ಸಿಎಂ ಅಧಿಕೃತವಾಗಿ ತಮ್ಮ ಕಚೇರಿಯಿಂದ ರಾಜಭವನಕ್ಕೆ ಇಂದು ಪತ್ರ ರವಾನಿಸಲು ನಿರ್ಧರಿಸಿದ್ದು, ಈ ಸಂಬಂಧ ಸಿಎಂ ನಿನ್ನೆ ತಮ್ಮ ಆಪ್ತರ ಜತೆ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಮಾಜ ಕಲ್ಯಾ ಖಾತೆ ಕೋರಿ ಜಾರಕಿಹೊಳಿ ಅವರು ರಾಜಿನಾಮೆ ನೀಡಿದ್ದರು. ಆದರೆ ಅದು ಸಿದ್ದು ಆಪ್ತರಾದ ಆಂಜನೇಯ ಅವರ ಬಳಿ ಇದೆ. ರಾಜಿನಾಮೆ ಪ್ರಹಸನ ಮುಕ್ತಾಯಗೊಳಿಸುವಾಗ ಜಾರಕಿಹೊಳಿ ಅವರಿಗೆ ತಮ್ಮ ಬಳಿ ಇರುವ ಸಣ್ಣ ಕೈಗಾರಿಕೆ ಖಾತೆ ನೀಡುವುದಾಗಿ ಸಿದ್ದು ಭರವಸೆ ನೀಡಿದ್ದರು. ಆದರೆ ಸಮಯ ಕೂಡಿ ಬಂದಿರಲಿಲ್ಲ. ದಲಿತ ಸಿಎಂ ವಾದ ತಾರಕಕ್ಕೇರಿದ ಸಂದರ್ಭದಲ್ಲಿ ಜಾತಿ ಲೆಕ್ಕಾಚಾರ ನಡೆಸಿರುವ ಸಿದ್ದು ಬಣ ತಕ್ಷಣ ಜಾರಕಿಹೊಳಿ ಅವರಿಗೆ ಹೆಚ್ಚುವರಿ ಖಾತೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com