ಬೆಂಗಳೂರಿನಲ್ಲಿ ಮತ್ತೊಂದು ಜೀವಂತ ಹೃದಯ ರವಾನೆ

ಇಲ್ಲಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಿಂದ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆ ಜೀವಂತ ಹೃದಯವೊಂದು ರವಾನೆಯಾಗಲಿದೆ...
ಹೃದಯ (ಸಾಂದರ್ಭಿಕ ಚಿತ್ರ)
ಹೃದಯ (ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು: ಇಲ್ಲಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಿಂದ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆ ಜೀವಂತ ಹೃದಯವೊಂದು ರವಾನೆಯಾಗಲಿದೆ. ಬಿಜಿಎಸ್ ಆಸ್ಪತ್ರೆಯಲ್ಲಿರುವ ವ್ಯಕ್ತಿಯೋರ್ವರಿಗೆ ಹೃದಯದ ಅಗತ್ಯವಿದ್ದು,  ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬ್ರೈನ್ ಡೆಡ್ ಆಗಿರುವ ವ್ಯಕ್ತಿಯೊಬ್ಬರ ಹೃದಯವನ್ನು  ದಾನ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿರುವ  ಬಾಲಾಜಿ (21) ಎಂಬ ಯುವಕನ ಜ.1 ರಂದು ಜಾಲಹಳ್ಳಿಯಲ್ಲಿ ಅಪಘಾತಕ್ಕೀಡಾಗಿದ್ದು, ಆತನ ಮೆದುಳು ಸಿಷ್ಕ್ರಿಯವಾಗಿದೆ. ಈ ಹಿನ್ನೆಲೆಯಲ್ಲಿ ಬಾಲಾಜಿಯ ಹೃದಯವನ್ನು ದಾನ ಮಾಡಲಾಗಿದ್ದು, ಜೀವಂತ ಹೃದಯವನ್ನು ಬಿಜಿಎಸ್ ಆಸ್ಪತ್ರೆಯತ್ತ ಕೊಂಡೊಯ್ಯಲಾಗಿದೆ. ಈಗಾಗಲೇ ರಸ್ತೆಗಳಲ್ಲಿ ಟ್ರಾಫಿಕ್ ಫ್ರೀ ವ್ಯವಸ್ಥೆ ಕಲ್ಪಿಸಿದ್ದು, ಜೀವಂತ ಹೃದಯವನ್ನು ಹೊತ್ತ ಅ್ಯಂಬುಲೆನ್ಸ್ ಸಾಗುವ ದಾರಿಯುದ್ದಕ್ಕೂ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com