ಭಾರತ ಈಗ ಬಡದೇಶವಾಗಿ ಉಳಿದಿಲ್ಲ. ನಮ್ಮ ದೇಶ ಪ್ರಗತಿಯತ್ತ ಸಾಗುತ್ತಿದೆ. ನಮ್ಮ ದೇಶದಲ್ಲಿನ ಪ್ರಜಾಪ್ರಭುತ್ವ ಮತ್ತು ಯುವ ಜನತೆಯೇ ನಮ್ಮ ಶಕ್ತಿಯಾಗಿದೆ. ಭಾರತದ ಜನಸಂಖ್ಯೆಯಲ್ಲಿ ಶೇ.50 ಜನರು 25 ವರ್ಷದ ಕೆಳಗಿನವರಾಗಿದ್ದಾರೆ. ಸರ್ಕಾರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಶಿಕ್ಷಣ, ಆರೋಗ್ಯ ಮತ್ತು ಸಂಶೋಧನೆಯತ್ತ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಇಲ್ಲಿನ ಯುವಜನತೆಯೇ ಭಾರತದ ರಾಯಭಾರಿಗಳಾಗಿದ್ದಾರೆ ಎಂದು ಸುಷ್ಮಾ ಹೇಳಿದ್ದಾರೆ.