ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರದ್ದೇ ಕೊನೆಯ ಮಾತು: ಮದನ್ ಮಿತ್ರ

ಶಾರದಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ
ಮದನ್ ಮಿತ್ರ
ಮದನ್ ಮಿತ್ರ
Updated on

ಕೋಲ್ಕತ್ತಾ: ಶಾರದಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಮದನ್ ಮಿತ್ರ, ರಾಜ್ಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರದ್ದೇ ಕೊನೆಯ ಮಾತು ಎಂದಿದ್ದಾರೆ.

ರಾಜ್ಯ ಆಡಳಿತದ ಎಸ್ ಎಸ್ ಕೆ ಎಂ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಬರುವಾಗ ಅವರು ಈ ಮಾತುಗಳನ್ನಾಡಿದ್ದಾರೆ. "ಮುಂದಿನ ೨೦ ವರ್ಷಗಳವರೆಗೆ ಮಮತಾ ಬ್ಯಾನರ್ಜಿ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ" ಎಂದಿರುವ ಅವರು ಮುಂಬರಲಿರುವ ಲೋಕಸಭಾ ಮತ್ತು ವಿಧಾನ ಸಭಾ ಉಪಚುನಾವಣೆಗಳಲ್ಲಿ ತೃಣಮೂಲ ಕಾಂಗ್ರೆಸ್ ಗೆಲ್ಲಲಿದೆ ಎಂದಿದ್ದಾರೆ.

ಎಸ್ ಎಸ್ ಕೆ ಎಂ ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿ ಮದನ್ ಮಿತ್ರ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಬಹುಕೋಟಿ ಶಾರದಾ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕಳೆದ ಡಿಸೆಂಬರ್ ನಲ್ಲಿ ಸಿಬಿಐ, ಮದನ್ ಮಿತ್ರಾ ಅವರನ್ನು ಬಂಧಿಸಿತ್ತು. ಸದ್ಯಕ್ಕೆ ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com